9/11- ಅವತ್ತು ಅಮೆರಿಕೆಯೇನು? ಇಡೀ ಜಗತ್ತೇ ನಡುಗಿತ್ತು!

Posted by ಅರುಂಧತಿ | Posted in | Posted on 1:08 AM

ನಡುಗಿತ್ತು ಅಮೆರಿಕ…

ಯಾರೇ ಆಗಲಿ, ತಾವು ಎಷ್ಟೇ ಬಲಶಾಲಿಗಳೆಂದು ಬೀಗಿದರೂ ಅವರಿಗಿಂತ ಸರ್ವಶಕ್ತನಾದ ಭಗವಂತನೊಬ್ಬ ಇದ್ದೇ ಇದ್ದಾನೆ.
ಕ್ರೈಸ್ತ ಜನಾಂಗ ವಿಶ್ವದ ಇತರ ರಾಷ್ಟ್ರಗಳ ಮೇಲೆ ದಾಳಿ ಮಾಡಿ, ಹಿಂಸೆಯಿಂದ, ಕುಯುಕ್ತಿಯಿಂದ ಜನರನ್ನು ಗುಲಾಮರನ್ನಾಗಿ ಮಾಡಿಕೊಂಡಿತು. ಕೊಳ್ಳೆಹೊಡೆದ ಹಣದ ಮದದಿಂದಲೇ ಜಗತ್ತನ್ನು ಅಡಿಯಾಳಗಿಸಿಕೊಳ್ಳಲು ಹವಣಿಸಿತು.
ಒಸಾಮಾ ಬಿನ್ ಲ್ಯಾಡೆನ್, ಇಂತಹ ಮದದಿಂದ ಬೀಗುತ್ತಿದ್ದ ಅಮೆರಿಕೆಯ ಮೇಲೇರಿಹೋಗಿ ಭಯೋತ್ಪಾದನೆಯ ಮೂಲಕ (ಅದಂತೂ ಧರ್ಮಾಂಧತೆಯ ಮತ್ತೊಂದು ಮುಖ) ವರ್ಲ್ಡ್ ಟ್ರೇಡ್ ಬಿಲ್ಡಿಂಗನ್ನು ಕೆಡವಿ ಅಮೆರಿಕೆಯನ್ನು ಗಲಗಲ ಅಲುಗಿಸಿಬಿಟ್ಟ. ಎರಡು ಕ್ರೂರ ಜನಾಂಗಗಳು ಧರ್ಮಾಂಧತೆಯ ಅಂಧಕಾರದಲ್ಲಿ ವರ್ತಿಸಿದ ಪರಿ ಇದು. ಹಾಗೆ ಲ್ಯಾಡೆನ್ ವಿಮಾನದ ಮೂಲಕ ಕಟ್ಟಡಗಳ ಮೇಲೆ ತನ್ನ ಬಂಟರನ್ನು ಛೂಬಿಟ್ಟಿದ್ದು, ಈಗ್ಗೆ ಎಳು ವರ್ಷಗಳ ಕೆಳಗೆ, 2001ರ ಸೆಪ್ಟೆಂಬರ್ 11ರಂದು.

ಅವತ್ತು ಇಡೀ ಜಗತ್ತೇ ನಡುಗಿತ್ತು!

ಸುಮಾರು ನೂರಾ ಹದಿನೈದು ವರ್ಷಗಳ ಹಿಂದಿನ ಮಾತು. ಆಗ ಕೂಡ ಜಗತ್ತಿನ ಇತರೆಲ್ಲ ಧರ್ಮಗಳು ನಡುಗಿದ್ದವು. ತಲೆ ತಗ್ಗಿಸಿ ಕುಳಿತಿದ್ದವು. ಆಗ ಯಾವುದೇ ಹಿಂಸೆ ನಡೆದಿರಲಿಲ್ಲ. ಹಾಗೆ ನಡುಗಿಸಿದವನ ಮನದಲ್ಲಿ ಮೌಢ್ಯವಿರಲಿಲ್ಲ, ಆತ ಧರ್ಮಾಂಧನೂ ಆಗಿರಲಿಲ್ಲ.
ಕಾವಿಯುಟ್ಟ, ಉದಾತ್ತ ನಿಲುವಿನ ಆ ವೀರ ಸಂನ್ಯಾಸಿ ತನ್ನ ಧರ್ಮಕ್ಕೆ ತಕ್ಕ ಸಂಸ್ಕಾರದಿಂದ ಜಗತ್ತನ್ನುದ್ದೇಶಿಸಿ ಮಾತನಾಡಿದ್ದ. ನಿಜವಾದ ಧರ್ಮ ಇಂಥದ್ದು ಎಂದು ಗುಡುಗಿದ್ದ. ಆವರೆಗೂ ಭಾರತೀಯರೆಂದರೆ ಹುಟ್ಟಿದ ಮಗುವನ್ನು ಮೊಸಳೆಗೆಸೆಯುವವರು ಎಂಬ ಮೌಢ್ಯಕ್ಕೆ ಬಲಿಯಾಗಿದ್ದ ಜನ ಆ ಸಿಂಹ ವಾಣಿಗೆ ನಡುಗಿಹೋದರು. ಭರತೀಯತೆಯ, ಹಿಂದುತ್ವದ ನೈಜ ಪರಿಚಯ ಅಂದು ಜಗತ್ತಿನ ಮೂಲೆ ಮೂಲೆಗಳನ್ನೂ ತಲುಪಿತು. ತನ್ನ ನಾಡಿನಲ್ಲಿ ನಿರಂತರ ದೌರ್ಜನ್ಯ ನಡೆಸುತ್ತಿದ್ದ ಕ್ರೈಸ್ತರಿಗೆ ಆತ ಅಮೆರಿಕೆಯ ನೆಲದಲ್ಲಿ ನಿಂತು ಛಡಿಯೇಟು ಕೊಟ್ಟಿದ್ದ.
ಅದು, ವಿಶ್ವ ಧರ್ಮ ಸಮ್ಮೆಳನದ ಸಂದರ್ಭ. ಸ್ಥಳ- ಅಮೆರಿಕೆಯ ಚಿಕಾಗೋ, ದಿನಾಂಕ- 1893ರ ಸೆಪ್ಟೆಂಬರ್ 11 !
ಹಾಗೆ ಹಿಂದುತ್ತ್ವದ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ ವ್ಯಕ್ತಿ- ಸ್ವಾಮಿ ವಿವೇಕಾನಂದ!!

ಧರ್ಮಾಂಧತೆಗೂ ಧರ್ಮ ಶ್ರದ್ಧೆಗೂ ಎಷ್ಟೊಂದು ವ್ಯತ್ಯಾಸ!?
ವಿಶ್ವ ಧರ್ಮ ಸಮ್ಮೇಳನದಲ್ಲಿ ಸ್ವಾಮೀಜಿ ಆಡಿದ ಮಾತುಗಳ ಸಾರಾಂಶ ನೀಡಲಿದ್ದೇವೆ ಕನ್ನಡದಲ್ಲಿ, ಅತಿ ಶೀಘ್ರದಲ್ಲಿ.

Comments Posted (0)